ಶಿವಮೊಗ್ಗ: ಜಿಲ್ಲಾ ಪೊಲೀಸ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಮುಖ್ಯ ಮಂತ್ರಿ ಚಿನ್ನದ ಪದಕಕ್ಕೆ ಪಾತ್ರರಾಗಿರುತ್ತಾರೆ, ಶಿವಮೊಗ್ಗ ಜಿಲ್ಲಾ ಪೊಲೀಸ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳಾದ
ಡಾ. ಶೇಖರ್ ಹೆಚ್. ಟಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ. ಕೆ ಟಿ ಗುರುರಾಜ್ ಪೊಲೀಸ್ ನಿರೀಕ್ಷಕರು, ಸಿಇಎನ್ ಪೊಲೀಸ್ ಠಾಣೆ, ಶಿವಮೊಗ್ಗ. ಅಂಥೋನಿ, ಎಎಸ್ಐ, ದೊಡ್ಡಪೇಟೆ ಪೊಲೀಸ್ ಠಾಣೆ, ಶಿವಮೊಗ್ಗ , ಇಂದ್ರೇಶ, ಸಿಹೆಚ್.ಸಿ- 1968, ಸಿಡಿಆರ್ ವಿಭಾಗ, ಜಿಲ್ಲಾ ಪೊಲೀಸ್ ಕಛೇರಿ ಶಿವಮೊಗ್ಗ ರವರು ಪೊಲೀಸ್ ಇಲಾಖೆಯಲ್ಲಿ ಸಲ್ಲಿಸಿರುವ ಪ್ರಶಂಸನೀಯ ಸೇವೆಗಾಗಿ ಮಾನ್ಯ ಮುಖ್ಯ ಮಂತ್ರಿಗಳ ಚಿನ್ನದ ಪದಕಕ್ಕೆ ಪಾತ್ರರಾಗಿರುತ್ತಾರೆ.
ಇವರಿಗೆ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಅಭಿನಂದನೆಗಳನ್ನು ಸಲ್ಲಿಸಲಾಗಿರುತ್ತದೆ ಎಂದು ಕೆ ಎಂ ಶಾಂತರಾಜು ಪೊಲೀಸ್ ಅಧೀಕ್ಷಕರು ತಿಳಿಸಿರುತ್ತಾರೆ.