ತುಮಕೂರು: ಪ್ರವಾದಿ ಮುಹಮ್ಮದ್ (ಸ) ಮಾನವತೆಯ ಮಾರ್ಗದರ್ಶಕ” ರಾಜ್ಯ ಮಟ್ಟದ ಸೀರತ್ ಅಭಿಯಾನದ ಪ್ರಯುಕ್ತ ಜಮಾಅತೆ ಇಸ್ಲಾಮಿ ಹಿಂದ್ ತುಮಕೂರು ಈ ವಿಷಯದಲ್ಲಿ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯನ್ನು ಕನ್ನಡ ಭಾμÉಯಲ್ಲಿ ಏರ್ಪಡಿಸಿದೆ. 16 ವರ್ಷ ಮೇಲ್ಪಟ್ಟ ಎಲ್ಲಾ ದೇಶಬಾಂಧವರು ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದ್ದು ಈ ತಿಂಗಳ ಅಂತ್ಯದೊಳಗೆ ಪ್ರಬಂಧಗಳನ್ನು ತಲುಪಿಸಬೇಕು. ವಿಜೇತರಾದವರಿಗೆ ಪ್ರಥಮ ಬಹುಮಾನ ರೂ.10000, ದ್ವಿತೀಯ ಬಹುಮಾನ 7000, ತೃತೀಯ ಬಹುಮಾನ 5000 ನೀಡಲಾಗುವುದು. ಭಾಗವಹಿಸಿದ ಎಲ್ಲರಿಗೂ ಸಮಾಧಾನಕರ ಬಹುಮಾನ ಹಾಗೂ ಪ್ರಶಸ್ತಿ ಪತ್ರ ನೀಡಲಾಗುವುದು. ಹೆಚ್ಚಿನ ವಿವರಗಳಿಗೆ ತುಮಕೂರು- 9449402954, ತಿಪಟೂರು-9740127403, ಸಿರಾ-9481133016, ಕುಣಿಗಲ್-9448550390. ಸಂಪರ್ಕಿಸಬೇಕಾಗಿ ಸಂಚಾಲಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.